¶ ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?
TSK
TSK · ಯಾಕೋಬನು 5:16
Treasury of Scripture Knowledge references in ಕನ್ನಡ IRV.
ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.
ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.
ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.
ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.
¶ ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು
ಅರಸನು ಆ ಮನುಷ್ಯನಿಗೆ, “ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು” ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.
ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು ಯೆಹೋವನಿಗೆ ಪ್ರಾರ್ಥಿಸಿ, ಹೀಗೆ ವಿಜ್ಞಾಪಿಸಿಕೊಂಡನು.
ಯೆಹೋವನು ಹಿಜ್ಕೀಯನ ಪ್ರಾರ್ಥನೆಯನ್ನು ಲಾಲಿಸಿ ಜನರನ್ನು ಸ್ವಸ್ಥಗೊಳಿಸಿದನು.
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.
ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
“ದಾನಿಯೇಲನು ಆ ಸಮಾಚಾರವನ್ನು ತಿಳಿಸಿ, ನಾವು ಬಾಬೆಲಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರಿಸಲು ಆತನನ್ನು ಬೇಡಿಕೊಳ್ಳೋಣ” ಎಂದನು.
ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು, ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು;
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
‹ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ”› ಅಂದನು.
ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
¶ ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ, ಸಭೆಯವರು ಅವನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು.
ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
¶ ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
¶ ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
¶ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು.
ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.