TSK

TSK · ಯಾಕೋಬನು 5:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ, ಅವರ ಕುಯುಕ್ತಿಯು ವ್ಯರ್ಥವಾದದ್ದೇ.

ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.

“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”

‹ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು”› ಎಂದು ಹೇಳಿದನು.

ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.

ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.

ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.

ಸಂಶಯಪಡುವವರಿಗೆ ಕರುಣೆಯನ್ನು ತೋರಿಸಿರಿ,