¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
TSK
TSK · ಯಾಕೋಬನು 5:4
Treasury of Scripture Knowledge references in ಕನ್ನಡ IRV.
¶ ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.
¶ “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
ನನ್ನ ಭೂಮಿಯು ನನ್ನ ಮೇಲೆ ಕೂಗಿಕೊಂಡರೆ ಅದರ ನೇಗಿಲ ಗೆರೆಗಳೆಲ್ಲಾ ಅತ್ತರೆ,
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’
‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›
¶ ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.