¶ ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
TSK
TSK · ಯೆರೆಮಿಯ 12:13
Treasury of Scripture Knowledge references in ಕನ್ನಡ IRV.
ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.
ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಯಬ್ದವಾಗಿವೆ.
ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”
ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.