TSK

TSK · ಯೆರೆಮಿಯ 13:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.

ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.

ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.

ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು.

ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು. ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ.

ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.

ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.