TSK

TSK · ಯೆರೆಮಿಯ 13:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?

ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.

ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು, ಕಣ್ಣಿಗಳನ್ನು ಕಿತ್ತು “ನಾನು ಸೇವೆ ಮಾಡುವುದಿಲ್ಲ” ಎಂದು ಅಂದುಕೊಳ್ಳುತ್ತಿದ್ದಿ, ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಜಾರಳಂತೆ ನಡೆದುಕೊಂಡಿದ್ದಿ.

¶ ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.

ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.

ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.

ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?

ಹೇಗೆಂದರೆ, ‹“ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.›

¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.