ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.
TSK
TSK · ಯೆರೆಮಿಯ 14:2
Treasury of Scripture Knowledge references in ಕನ್ನಡ IRV.
ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.
ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.
ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.
ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.
ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.
ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.
ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.
ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.