ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ.
TSK
TSK · ಯೆರೆಮಿಯ 14:21
Treasury of Scripture Knowledge references in ಕನ್ನಡ IRV.
ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.
ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.
ನಿನ್ನ ಒಡಂಬಡಿಕೆಯನ್ನು ಲಕ್ಷ್ಯಕ್ಕೆ ತಂದುಕೋ. ದೇಶದ ಅಂಧಕಾರ ಸ್ಥಾನಗಳಲ್ಲಿ ಬಲತ್ಕಾರವು ತುಂಬಿ ವಾಸಿಸುತ್ತದಲ್ಲಾ.
ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
¶ ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!
ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?
ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.
ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
¶ ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;
‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›
ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.