TSK

TSK · ಯೆರೆಮಿಯ 17:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

¶ ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.

ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,

¶ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.

ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.

‹ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು”› ಅಂದನು.

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.