TSK

TSK · ಯೆರೆಮಿಯ 2:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.

ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.”

ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.

¶ ಐಗುಪ್ತ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ, ಪತ್ರೋಸ್ ಪ್ರಾಂತ್ಯದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ,

ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.

ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.