ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
TSK
TSK · ಯೆರೆಮಿಯ 2:30
Treasury of Scripture Knowledge references in ಕನ್ನಡ IRV.
ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.
ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.
ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.
ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.
¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
¶ “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”
‹ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.›
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
‹ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.›
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.