TSK

TSK · ಯೆರೆಮಿಯ 2:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.

ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು.

ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.

“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?

ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.

“ನರಪುತ್ರನೇ, ನಿನ್ನ ಸಹೋದರರು, ನಿನ್ನ ಅಣ್ಣತಮ್ಮಂದಿರು, ನಿನ್ನ ನೆಂಟರು ಅಂತು ಯೆರೂಸಲೇಮಿನವರು ಮತ್ತು ಇಸ್ರಾಯೇಲ್ ವಂಶದವರಲ್ಲಿ ಉಳಿದಿರುವವರು, ‘ಯೆಹೋವನ ಬಳಿಯಿಂದ ದೂರವಾಗಿ ತೊಲಗಿರಿ, ಈ ದೇಶವು ನಮಗೇ ಸ್ವತ್ತಾಗಿ ಸಿಕ್ಕಿದೆ’ ಎಂದು ಹೀನೈಸಿದರೋ ಅವರೆಲ್ಲರು ಉಳಿದಿದ್ದಾರಲ್ಲಾ.

“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.

“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.

“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.