ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
TSK
TSK · ಯೆರೆಮಿಯ 2:8
Treasury of Scripture Knowledge references in ಕನ್ನಡ IRV.
ದೇವರಿಗೆ ಇಷ್ಟವಿಲ್ಲದ ವಿಷಯಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ, ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ.
ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.
ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.
ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
‹ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?›
‹ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.›
¶ ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,