‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
TSK
TSK · ಯೆರೆಮಿಯ 20:2
Treasury of Scripture Knowledge references in ಕನ್ನಡ IRV.
ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!
“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.
ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.
¶ ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.
‹ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.›
‹ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.›
ಅಸೂಯೆ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಸೆರೆಯಲ್ಲಿಟ್ಟರು.
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.
ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.