¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.
TSK
TSK · ಯೆರೆಮಿಯ 21:10
Treasury of Scripture Knowledge references in ಕನ್ನಡ IRV.
ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.
ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.
ಬಾಬೆಲಿನ ಅರಸನು ಈ ಪಟ್ಟಣವನ್ನು ಆಕ್ರಮಿಸುವನು; ಅದು ಅವನ ಸೈನ್ಯದ ವಶವಾಗುವುದು ಖಂಡಿತ” ಎಂದು ಸಾರುತ್ತಿದ್ದನು.
ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
¶ “ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”