TSK

TSK · ಯೆರೆಮಿಯ 21:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

¶ ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.

ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.

ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.

ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!

ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”

¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?

ಅಯ್ಯೋ, ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವಬಲವನ್ನು ಆಶ್ರಯಿಸುವವರ ಗತಿಯನ್ನು ಏನು ಹೇಳಲಿ! ರಥಗಳು ಬಹಳವೆಂದು ಅವುಗಳಲ್ಲಿ ನಂಬಿಕೆಯಿಟ್ಟು, ಸವಾರರು ಬಹು ಬಲಿಷ್ಠರೆಂದು ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲರ ಸದಮಲಸ್ವಾಮಿಯ ಕಡೆಗೆ ದೃಷ್ಟಿಯಿಡುವುದಿಲ್ಲ, ಯೆಹೋವನನ್ನು ಆಶ್ರಯಿಸುವುದಿಲ್ಲ.

ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.

ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”

ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.

ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.

ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.

ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.

ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.

ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”

ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,

ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.

ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.