ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
TSK
TSK · ಯೆರೆಮಿಯ 21:4
Treasury of Scripture Knowledge references in ಕನ್ನಡ IRV.
ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.
ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
ಕರ್ತನು ತನ್ನ ಯಜ್ಞವೇದಿಯನ್ನು ತಿರಸ್ಕರಿಸಿ, ತನ್ನ ಪವಿತ್ರಾಲಯಕ್ಕೆ ಅಸಹ್ಯಪಟ್ಟು, ಚೀಯೋನಿನ ಅರಮನೆಗಳ ಗೋಡೆಗಳನ್ನು ಶತ್ರು ವಶಮಾಡಿದ್ದಾನೆ; ಉತ್ಸವದಿನದಲ್ಲಿ ಘೋಷಿಸುವಂತೆ ಶತ್ರುಗಳು ಯೆಹೋವನ ಮಂದಿರದಲ್ಲಿ ಜಯಘೋಷವೆತ್ತಿದ್ದಾರೆ.
ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
‹ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.›