TSK

TSK · ಯೆರೆಮಿಯ 21:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,

ಇಗೋ, ಅವರ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು. ಇವರು ಬೆಳ್ಳಿಯನ್ನು ಲಕ್ಷಿಸರು. ಬಂಗಾರವನ್ನು ಪ್ರೀತಿಸರು.

ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.

ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.

ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.

ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.

ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.

ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.

ಇದಲ್ಲದೆ ಬಾಬೆಲಿನ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನೂ ಕಿತ್ತು, ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ, ಅವನು ಜೀವದಿಂದ ಇರುವವರೆಗೆ ಸೆರೆಯಲ್ಲಿ ಇಟ್ಟನು.

ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”

ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.

ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.