ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
TSK
TSK · ಯೆರೆಮಿಯ 22:2
Treasury of Scripture Knowledge references in ಕನ್ನಡ IRV.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
¶ “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
¶ ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ,
ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.
¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,