TSK

TSK · ಯೆರೆಮಿಯ 25:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.

ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.

ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.

ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.

ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”

ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.

¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.

¶ ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.