ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
TSK
TSK · ಯೆರೆಮಿಯ 27:13
Treasury of Scripture Knowledge references in ಕನ್ನಡ IRV.
ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.