ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
TSK
TSK · ಯೆರೆಮಿಯ 27:9
Treasury of Scripture Knowledge references in ಕನ್ನಡ IRV.
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.
ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
¶ ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.