¶ ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;
TSK
TSK · ಯೆರೆಮಿಯ 30:21
Treasury of Scripture Knowledge references in ಕನ್ನಡ IRV.
¶ ಅಬ್ರಹಾಮನು, “ಕರ್ತನೇ, ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತನಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು” ಎನ್ನಲು ಆತನು, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುವೆನು, ನಾಶ ಮಾಡುವುದಿಲ್ಲ.” ಎಂದನು.
ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.
ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.
¶ “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.
‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.
ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.
ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ, ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.”
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?
¶ “‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.
ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.
ದಾವೀದನು ಸ್ವರ್ಗಾರೋಹಣ ಮಾಡಲಿಲ್ಲವಲ್ಲಾ. ತಾನೇ ಹೇಳುವ ಮಾತೇನಂದರೆ, “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದ ಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ದೇವರಾದ ಕರ್ತನು ನನ್ನ ಕರ್ತನಿಗೆ ನುಡಿದನು’ ಎಂಬುದೇ.
ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
¶ ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
¶ ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.