TSK

TSK · ಯೆರೆಮಿಯ 32:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.

ಬಳಿಕ ಯೆಹೋವನ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕಾರಾಗೃಹದ ಅಂಗಳದಲ್ಲಿ ನನ್ನ ಬಳಿಗೆ ಬಂದು, “ಬೆನ್ಯಾಮೀನ್ ಸೀಮೆಯ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ, ಅದಕ್ಕೆ ನೀನೇ ಬಾಧ್ಯನು. ಪರಾಧೀನವಾಗದಂತೆ ಕೊಂಡುಕೊಳ್ಳುವ ಹಕ್ಕೂ ನಿನ್ನದೇ; ನಿನಗಾಗಿಯೇ ಕೊಂಡುಕೋ” ಎಂದು ಹೇಳಿದನು. ಕೂಡಲೆ ಇದು ಯೆಹೋವನ ನುಡಿ ಎಂದು ನನಗೆ ಗೊತ್ತಾಯಿತು.

ಮತ್ತು ಯೆರೆಮೀಯನು ಬಾರೂಕನಿಗೆ, “ಯೆಹೋವನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಯಾಗಿದೆ;

ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.

ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.

ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,