‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
TSK
TSK · ಯೆರೆಮಿಯ 38:13
Treasury of Scripture Knowledge references in ಕನ್ನಡ IRV.
ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತು ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.
ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.
¶ ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.