“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.
TSK
TSK · ಯೆರೆಮಿಯ 39:12
Treasury of Scripture Knowledge references in ಕನ್ನಡ IRV.
ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.
ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.
ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.