TSK

TSK · ಯೆರೆಮಿಯ 39:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:

ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;

¶ ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.

ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಇಂಥಾ ಕೆಲಸಗಳಿಗೆ ಅನುಕೂಲಿಸದಂತೆ ನನ್ನ ಅಪ್ಪಣೆಯ ಮೇರೆಗೆ ಬಿರುಸಾಗಿ ಹೊಡೆಯುತ್ತದೆ; ಈಗ ನನ್ನ ಜನರಿಗೆ ನ್ಯಾಯದಂಡನೆಗಳನ್ನು ವಿಧಿಸುವೆನು” ಎಂಬುದೇ.

ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.

ಅದೇನೆಂದರೆ, ಇಗೋ ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಪ್ರಾಣ ಹುಡುಕುತ್ತಿದ್ದ ಶತ್ರುವಾದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಕೈಗೆ ಕೊಟ್ಟಂತೆ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇದು ಯೆಹೋವನಾದ ನನ್ನ ನುಡಿ’” ಎಂಬುದೇ.

ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.

ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.