ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
TSK
TSK · ಯೆರೆಮಿಯ 4:2
Treasury of Scripture Knowledge references in ಕನ್ನಡ IRV.
ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.
ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.
ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.
ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”
“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ” ಎಂಬ ವೇದೋಕ್ತಿ ನೆರವೇರುವುದಕ್ಕಾಗಿಯೇ ಹೀಗಾಯಿತು.
¶ ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.