ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.
TSK
TSK · ಯೆರೆಮಿಯ 44:21
Treasury of Scripture Knowledge references in ಕನ್ನಡ IRV.
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
¶ “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.
ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.