TSK

TSK · ಯೆರೆಮಿಯ 47:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.

ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.

ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.

ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.

ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

“ಆಹಾ, ಉತ್ತರ ದಿಕ್ಕಿನಿಂದ ಜನಸಮೂಹ ಬರುತ್ತದೆ, ಮಹಾ ಜನಾಂಗವು ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಹೊರಡುತ್ತದೆ.

ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು. ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ.

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.

‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!

ತುಂಬಿ ತುಳುಕುವ ವ್ಯೂಹಗಳೂ, ದೇವರ ನಿಬಂಧನಾಧಿಪತಿಯೂ ಅವನ ರಭಸಕ್ಕೆ ಸಿಕ್ಕಿ ಹೊಡೆದುಕೊಂಡು ಹೋಗಿ ಭಂಗವಾಗುವರು.

ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.

¶ ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.

¶ ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.