ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.
TSK
TSK · ಯೆರೆಮಿಯ 49:20
Treasury of Scripture Knowledge references in ಕನ್ನಡ IRV.
¶ ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.
ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”
ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು.
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.