TSK

TSK · ಯೆರೆಮಿಯ 49:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಅಬ್ರಾಮನು, “ಕರ್ತನಾದ ಯೆಹೋವನೇ, ನನಗೆ ಏನು ಕೊಟ್ಟರೇನು? ನಾನು ಸಂತಾನವಿಲ್ಲದವನು. ಮತ್ತು ನನ್ನ ಆಸ್ತಿಯೆಲ್ಲಾ, ದಮಸ್ಕದವನಾದ ಎಲೀಯೆಜರನ ಪಾಲಾಗುತ್ತದೆಯಲ್ಲಾ?” ಎಂದನು.

ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.

ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.

ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.

¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು? ಎಂದು ನಿನಗೆ ತಿಳಿಯದೋ ಎಂದು ಪತ್ರವನ್ನು ದೂತರ ಮೂಲಕ ಕಳುಹಿಸಿದ.’”

ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

¶ ದಮಸ್ಕದ ವಿಷಯವಾದ ದೈವೋಕ್ತಿ. “ಆಹಾ, ದಮಸ್ಕವು ಇನ್ನು ಪಟ್ಟಣವಾಗಿರದೇ ಹಾಳು ದಿಬ್ಬವಾಗಿರುವುದು.

ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.

ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

¶ ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ,

ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.

ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.

ದಮಸ್ಕದಲ್ಲಿ ಅರಸನಾದ ಅರೇತನ ಅಧೀನದಲ್ಲಿದ್ದ ಅಧಿಪತಿಯು ನನ್ನನ್ನು ಹಿಡಿಯಬೇಕೆಂದು ದಮಸ್ಕದವರ ಪಟ್ಟಣವನ್ನು ಕಾಯುತ್ತಿರಲು