TSK

TSK · ಯೆರೆಮಿಯ 49:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.

ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.

¶ ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,

¶ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.

¶ ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಮ್ಮ ಹತ್ತಿರ ಸಂಬಂಧಿಕರು. ಐಗುಪ್ತ್ಯರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲಾ.

¶ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.

ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.

ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.

ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.

ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.

ತೇಮಾನಿನಿಂದ ಕರುಣಾಸಾಗರನಾದ ದೇವರು ಬರುತ್ತಿದ್ದಾನೆ, ಸದಮಲಸ್ವಾಮಿಯು ಪಾರಾನ್ ಪರ್ವತದಿಂದ ಬರುತ್ತಾನೆ; ಸೆಲಾ. ಆತನ ಪ್ರಭಾವವು ಆಕಾಶಮಂಡಲವನ್ನೆಲ್ಲಾ ಆವರಿಸಿಕೊಂಡಿದೆ, ಆತನ ಮಹಿಮೆಯು ಭೂಮಂಡಲವನ್ನು ತುಂಬುತ್ತಿದೆ;

ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.