ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.
TSK
TSK · ಯೆರೆಮಿಯ 49:8
Treasury of Scripture Knowledge references in ಕನ್ನಡ IRV.
ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಆತನ ಭಯಂಕರಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಸಂದುಗೊಂದುಗಳಲ್ಲಿಯೂ, ಚೂಪಾದ ಶಿಖರಗಳ ಕಡಿದಾದ ಸ್ಥಳಗಳಿಗೂ ನುಗ್ಗುವರು.
¶ “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.
ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;
ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ, ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.
¶ ‹“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ›‹ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ)