ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ.
TSK
TSK · ಯೆರೆಮಿಯ 8:13
Treasury of Scripture Knowledge references in ಕನ್ನಡ IRV.
ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಯೆರೂಸಲೇಮಿನೊಳಕ್ಕೆ ಸೇರಿಸುವೆನು.
¶ “ಈ ದಂಗೆಕೋರ ಮನೆತನದವರಿಗೆ ದೃಷ್ಟಾಂತವನ್ನು ತಿಳಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿ;
ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದುಹಾಕಿದೆ. ಅವುಗಳನ್ನು ಹಾಳುಮಾಡಿ ದೂರ ಬಿಸಾಡಿಬಿಟ್ಟಿದೆ; ಅದರ ಕೊಂಬೆಗಳು ಬಿಳುಪಾದವು.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ನಿಮ್ಮ ದುಡಿತದ ಫಲವನ್ನೆಲ್ಲಾ ಆನೆಕಲ್ಲು ಮಳೆಯಿಂದಲೂ, ಬಿಸಿಗಾಳಿಗೂ ಹಾಳುಮಾಡಿ ನಿಮ್ಮನ್ನು ಬಾಧಿಸಿದರೂ, ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ” ಇದು ಯೆಹೋವನ ನುಡಿ.
ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, ‹“ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ”› ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.