ಆತನಿಂದ ದೂರಹೋಗಿ ಅನ್ಯದೇವರುಗಳನ್ನು ಪೂಜಿಸಬಾರದೆಂದು ಮತ್ತು ಆತನು ನಿಷೇಧಿಸಿರುವ ಸೂರ್ಯ, ಚಂದ್ರ ಅಥವಾ ನಕ್ಷತ್ರಮಂಡಲವನ್ನಾಗಲಿ ಸೇವಿಸಿ, ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ಅಸಹ್ಯವಾದದ್ದನ್ನು ನಡಿಸಿದರೆ,
TSK
TSK · ಯೆರೆಮಿಯ 8:2
Treasury of Scripture Knowledge references in ಕನ್ನಡ IRV.
ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.
ತನ್ನ ತಂದೆಯಾದ ಹಿಜ್ಕೀಯನು ತೆಗೆದು ಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ ಇಸ್ರಾಯೇಲರ ಅರಸನಾದ ಅಹಾಬನಂತೆ ಬಾಳದೇವತೆಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
ಇದಲ್ಲದೆ, ಯೆಹೂದ ಪ್ರಾಂತ್ಯದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಸುತ್ತಣ ಪ್ರದೇಶಗಳಲ್ಲಿಯೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ, ಬಾಳನಿಗೂ, ಸೂರ್ಯ, ಚಂದ್ರ ಹಾಗೂ ನಕ್ಷತ್ರಗಳು ಎನಿಸಿಕೊಳ್ಳುವ ಆಕಾಶಸೈನ್ಯಕ್ಕೂ, ಧೂಪಹಾಕುವುದಕ್ಕಾಗಿ ಯೆಹೂದ ರಾಜರಿಂದ ನೇಮಿಸಲ್ಪಟ್ಟ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.
¶ ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.
ಏಕೆಂದರೆ ಬೀದಿಗಳಲ್ಲಿ ಮಕ್ಕಳೂ, ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಅರಮನೆಗಳೊಳಗೆ ನುಗ್ಗಿದೆ.
ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಒಟ್ಟುಗೂಡಿಸುವುದಿಲ್ಲ, ಯಾರು ಹೂಣಿಡುವುದಿಲ್ಲ, ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.
¶ ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;