ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
TSK
TSK · ಯೆರೆಮಿಯ 9:2
Treasury of Scripture Knowledge references in ಕನ್ನಡ IRV.
ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.
ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.
ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.
ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.
ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.
ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.
ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.