TSK

TSK · ಯೋಬನು 1:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.

ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.

¶ ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ. ನನ್ನ ಜೀವಮಾನ ಕಾಲದಲ್ಲಿ ಸಮಾಧಾನವೂ, ಭದ್ರತೆಯೂ ಇರುವುದಲ್ಲವೇ?” ಎಂದು ಕೊಂಡನು.

ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.

ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?

ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು.

ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.

ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.

¶ ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.

ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು.

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?

ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.