TSK

TSK · ಯೋಬನು 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ಈ ಅಪಮಾನವನ್ನು ನಾನು ಮರೆಮಾಡುವುದಾದರೂ ಹೇಗೆ? ನಿನಗಂತೂ ಇಸ್ರಾಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತನಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು” ಎಂದಳು.

ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.

ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.

ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.

ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.

ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.

ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.

ಆತನು ತಿರುಗಿಕೊಂಡು ಪೇತ್ರನಿಗೆ, ‹“ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ”› ಎಂದು ಹೇಳಿದನು.

ಆಗ ಯೇಸು ಪೇತ್ರನಿಗೆ, ‹“ಕತ್ತಿಯನ್ನು›‹ಒರೆಯಲ್ಲಿ ಹಾಕು.›‹ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?”› ಎಂದು ಹೇಳಿದನು.

ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.