ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.
TSK
TSK · ಯೋಬನು 21:30
Treasury of Scripture Knowledge references in ಕನ್ನಡ IRV.
ಮನುಷ್ಯರ ಕಷ್ಟದಲ್ಲಿ ಅವರು ಭಾಗಿಗಳಾಗುವುದಿಲ್ಲ; ಇತರರಿಗೆ ತಗುಲುವಂತೆ ಅವರಿಗೆ ಅಂಟುರೋಗವೂ ತಗುಲುವುದಿಲ್ಲ.
ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
¶ ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.