ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
TSK
TSK · ಯೋಬನು 35:13
Treasury of Scripture Knowledge references in ಕನ್ನಡ IRV.
ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.
ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.
ನೀವು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ, ನಾನು ಅದನ್ನು ಸ್ವೀಕರಿಸುವುದಿಲ್ಲ, ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸಿದ ಕೊಬ್ಬಿದ ಪಶುಗಳನ್ನು ನೋಡುವುದಿಲ್ಲ.
ಆತನು ಆಕೆಯನ್ನು, ‹“ನಿನ್ನ ಅಪೇಕ್ಷೆ ಏನು?”› ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.