“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು
TSK
TSK · ಯೋಬನು 36:7
Treasury of Scripture Knowledge references in ಕನ್ನಡ IRV.
ಆತನು ದೀನರನ್ನು ಧೂಳಿನಿಂದ ಎತ್ತಿ; ದರಿದ್ರರನ್ನು ತಿಪ್ಪೆಯಿಂದ ಎಬ್ಬಿಸಿ ಅಧಿಪತಿಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂಮಿಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.
ನಿನ್ನ ಮನೆಯೂ ಅರಸುತನವೂ ಸದಾಕಾಲ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು’” ಎಂದು
ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
¶ ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.”