ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ಯೋಬನು 4:3
Treasury of Scripture Knowledge references in ಕನ್ನಡ IRV.
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
‹ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು”› ಎಂದು ಹೇಳಿದನು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ.