“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ, ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಇನ್ನೂ ಆಡುತ್ತಿದೆ (ಕೇಳಿರಿ)!
TSK
TSK · ಯೋಬನು 40:8
Treasury of Scripture Knowledge references in ಕನ್ನಡ IRV.
ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.
ಮೃತ್ಯುವಿನಿಂದ ನೀವು ಪಡೆದುಕೊಂಡ ಒಡಂಬಡಿಕೆಯು ಸಾಗದು, ಪಾತಾಳದೊಡನೆ ನೀವು ಮಾಡಿಕೊಂಡ ಒಪ್ಪಂದವು ನಿಲ್ಲದು; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ನಿಮ್ಮನ್ನು ತುಳಿದುಬಿಡುವುದು.
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.