ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.
TSK
TSK · ಯೋಬನು 8:3
Treasury of Scripture Knowledge references in ಕನ್ನಡ IRV.
ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ?
ಇಗೋ, ಬಲಾತ್ಕಾರವೆಂದು ನಾನು ಕೂಗಿಕೊಂಡರೂ, ಯಾವ ಉತ್ತರವೂ ಇಲ್ಲ. ನಾನು ಮೊರೆಯಿಟ್ಟರೂ, ನ್ಯಾಯವು ನೆರವೇರದು.
ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.
ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.
ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.
ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.