ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.
TSK
TSK · ಯೋವೇಲ 1:10
Treasury of Scripture Knowledge references in ಕನ್ನಡ IRV.
ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.
ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.
ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.
ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
ಬೀಜಗಳು, ಹೆಂಟೆಗಳ ಕೆಳಗೆ ಕೆಟ್ಟುಹೋಗಿವೆ. ಉಗ್ರಾಣಗಳು ಬರಿದಾಗಿವೆ. ಕಣಜಗಳು ಕೆಡವಲ್ಪಟ್ಟಿವೆ, ಏಕೆಂದರೆ ಧಾನ್ಯವು ಒಣಗಿದೆ.
ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.