TSK

TSK · ಯೋವೇಲ 1:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.

ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.

ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,

ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.

ಹರ್ಷಾನಂದಗಳು ತೋಟಗಳಿಂದಲೂ, ಮೋವಾಬಿನ ಇಡೀ ದೇಶದಿಂದಲೂ ತೊಲಗಿವೆ; ತೊಟ್ಟಿಗಳಲ್ಲಿ ದ್ರಾಕ್ಷಾರಸವು ಇಲ್ಲದಂತೆ ಮಾಡಿದ್ದೇನೆ; ಯಾರೂ ದ್ರಾಕ್ಷಿತೊಟ್ಟಿಯಲ್ಲಿ ತುಳಿಯುತ್ತಾ ಹರ್ಷಧ್ವನಿಗೈಯರು; ಕೇಳಿಸುವ ಧ್ವನಿ ಹರ್ಷಧ್ವನಿಯಲ್ಲ.

ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.

ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,

ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.