ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
TSK
TSK · ಯೋವೇಲ 1:19
Treasury of Scripture Knowledge references in ಕನ್ನಡ IRV.
ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.
“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
¶ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›