ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.
TSK
TSK · ಯೋವೇಲ 1:4
Treasury of Scripture Knowledge references in ಕನ್ನಡ IRV.
ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.
¶ ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.
¶ “ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲೂ, ದೇಶವನ್ನು ತಿಂದು ಬಿಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲೂ, ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲೂ,
ಆತನು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು,
ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು, ‘ಖಂಡಿತವಾಗಿ ನಾನು ನಿನ್ನನ್ನು ಮಿಡತೆಗಳಷ್ಟು ಅಸಂಖ್ಯ ಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಜಯಘೋಷಮಾಡುವರು.
ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
¶ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.