TSK

TSK · ಯೋವೇಲ 2:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.

ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.

ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.

ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.

ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?

ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.

ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.

ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.

¶ ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.

ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,

ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.

¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.

ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು

“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.